ಅಳುವ ಕಡಲೊಳು ತೇಲಿ ಬರುತಲಿದೆ ನಗೆಯ ಹಾಯಿ ದೋಣಿ
ಬಿದ್ದ ಮನ ಮನದ ಕೊರಡೊಳು ಹೂವು ಹೂವು ಅರಳಿ
ಇದನರಿತೆನೆಂದೆ ಆ ಅರಿವು ಕಿರಣವನೆ ನುಂಗಿತೊಂದು ಮೇಘ
ಆ ಮುಗಿಲ ಬಸಿರನೆ ಬಗೆದು ಬಂತು ನವಕಿರಣ ಒಂದಮೋಘ
ಹಿಡಿದ ಹೊನ್ನೆ ಮಣ್ಣಹದು ಮಣ್ಣೊಳು ಹೊಳೆದುದುಂಟು ಹೊನ್ನು
ಇದು ಹೀಗೆ ಎಂಬ ನಂಬುಗೆಯ ಊರುಗೋಲಿಲ್ಲ ಇನ್ನು ಮುನ್ನು
ಆಶೆ ಎಂಬ ತಳವೊಡೆದ ದೋಣಿಯಲಿ ದೂರ ತೀರ ಯಾನ
ಯಾರ ಲೀಲೆಗೊ ಯಾರೊ ಏನೊ ಗುರಿ ಇರದೆ ಬಿಟ್ಟ ಬಾಣ
ಇದು ಬಾಳು ನೋಡು ಇದ ತಿಳಿದೆನೆಂದರು ತಿಳಿದ ಧೀರನಿಲ್ಲ
ಹಲವುತನದ ಮೈ ಮರೆಸುವಾಟವಿದು ನಿಜವು ತೋರದಲ್ಲ
ರಚನೆ: ಗೋಪಲಕೃಷ್ಣ ಅಡಿಗರು
ಗಾಯನ: ಕಾಳಿಂಗರಾವ್
Subscribe to:
Post Comments (Atom)
ಸಾರ್ಥ ಕ'ಥೆ'ಯ ಭಾವ (ಎಸ್. ಎಲ್. ಭೈರಪ್ಪನವರ ಸಾರ್ಥ ಕಾದಂಬರಿಯ ಒಂದು ಪಕ್ಷಿ ನೋಟ )
ಸಾರ್ಥ ಕ ' ಥೆ ' ಯ ಭಾವ ಸಾರ್ಥ ಎಂಬುದು ವಾಣಿಜ್ಯ ಪದ್ಧತಿ . ಎಂಟನೇ ಶತಮಾನದಲ್ಲಿ ಆನೆ , ಕುದುರೆ , ಹೇಸರಗತ್ತೆ ಹೀಗೆ ನೂರಾರು ಗಾಡಿಗಳ ಮೇಲೆ ...
-
ರೋಸೆವಿಲೆನಲ್ಲಿ ಉಪಾಕರ್ಮ... ಅಲಾರಂ ಗಡಿಯಾರ ಬೆಳಿಗ್ಗೆ ೫ ಗಂಟೆಗೆ ಹೊಡೆದು ಕೊಳ್ಳುತ್ತಾ ಇತ್ತು. ಎದ್ದು ತಲೆ ಮೇಲೆ ಮಟೊವರೆಗೂ ಸುಮ್ಮನೆ ಇರಲಿಲ್ಲ. ಕಡೆಗೂ ತಲೆ ಮೇಲೆ ಮಟ್...
-
ಏನ ಹೇಳಲಿ ಗೆಳತಿ ಅಸೂಯೆ ಕಾಡುತಿದೆ.... ಏನ ಹೇಳಲಿ ಗೆಳತಿ ಅಸೂಯೆ ಕಾಡುತಿದೆ ನೀ ಕೊಟ್ಟ ಪ್ರೀತಿ ಹಂಚಿದೆಯೇನೋ ಅನಿಸುತ್ತಿದೆ... ನಿನ್ನೊಡನೆಯ ಸಾಗರ ತೀರ, ತನ್ಮತೆಯ ...
-
ಆ ನಾಲ್ಕು ಜನ... ಆ ನಾಲ್ಕು ಜನ ಪುಂಡು ಹುಡುಗರೇ... ಒಬ್ಬಬ್ಬರಿಗೆ ಒಂದೊಂದು ಅಡ್ಡ ಹೆಸರುಗಳು....ಎಲ್ಲರು ಪ್ರಾಯಕ್ಕೆ ಬಂದಿರೋರೆ..... ಮೊದಲನೆಯವನು ಕರಿಯ, ದಪ್ಪಗೆ, ಕಪ್...
No comments:
Post a Comment