Saturday, March 7, 2009

ಅಳುವ ಕಡಲೊಳು ತೇಲಿ ಬರುತಲಿದೆ...

ಅಳುವ ಕಡಲೊಳು ತೇಲಿ ಬರುತಲಿದೆ ನಗೆಯ ಹಾಯಿ ದೋಣಿ
ಬಿದ್ದ ಮನ ಮನದ ಕೊರಡೊಳು ಹೂವು ಹೂವು ಅರಳಿ

ಇದನರಿತೆನೆಂದೆ ಆ ಅರಿವು ಕಿರಣವನೆ ನುಂಗಿತೊಂದು ಮೇಘ
ಆ ಮುಗಿಲ ಬಸಿರನೆ ಬಗೆದು ಬಂತು ನವಕಿರಣ ಒಂದಮೋಘ
ಹಿಡಿದ ಹೊನ್ನೆ ಮಣ್ಣಹದು ಮಣ್ಣೊಳು ಹೊಳೆದುದುಂಟು ಹೊನ್ನು
ಇದು ಹೀಗೆ ಎಂಬ ನಂಬುಗೆಯ ಊರುಗೋಲಿಲ್ಲ ಇನ್ನು ಮುನ್ನು

ಆಶೆ ಎಂಬ ತಳವೊಡೆದ ದೋಣಿಯಲಿ ದೂರ ತೀರ ಯಾನ
ಯಾರ ಲೀಲೆಗೊ ಯಾರೊ ಏನೊ ಗುರಿ ಇರದೆ ಬಿಟ್ಟ ಬಾಣ
ಇದು ಬಾಳು ನೋಡು ಇದ ತಿಳಿದೆನೆಂದರು ತಿಳಿದ ಧೀರನಿಲ್ಲ
ಹಲವುತನದ ಮೈ ಮರೆಸುವಾಟವಿದು ನಿಜವು ತೋರದಲ್ಲ

ರಚನೆ: ಗೋಪಲಕೃಷ್ಣ ಅಡಿಗರು
ಗಾಯನ: ಕಾಳಿಂಗರಾವ್

No comments:

ಸಾರ್ಥ ಕ'ಥೆ'ಯ ಭಾವ (ಎಸ್. ಎಲ್. ಭೈರಪ್ಪನವರ ಸಾರ್ಥ ಕಾದಂಬರಿಯ ಒಂದು ಪಕ್ಷಿ ನೋಟ )

ಸಾರ್ಥ ಕ ' ಥೆ ' ಯ ಭಾವ ಸಾರ್ಥ ಎಂಬುದು ವಾಣಿಜ್ಯ ಪದ್ಧತಿ . ಎಂಟನೇ ಶತಮಾನದಲ್ಲಿ ಆನೆ , ಕುದುರೆ , ಹೇಸರಗತ್ತೆ ಹೀಗೆ ನೂರಾರು ಗಾಡಿಗಳ ಮೇಲೆ ...