Saturday, March 7, 2009

ಅಮ್ಮ, ನಿನ್ನ ಎದೆಯಾಳದಲ್ಲಿ...

ಅಮ್ಮ, ನಿನ್ನ ಎದೆಯಾಳದಲ್ಲಿ
ಗಾಳಕ್ಕೆ ಸಿಕ್ಕ ಮೀನು
ಮಿಡುಕಾಡುತಿರುವೆ ನಾನು

ಕಡಿಯಲೋಲ್ಲೆ ನೀ ಕರುಳಬಳ್ಳಿ
ಒಲವೂಡುತಿರುವ ತಾಯೆ,
ಬಿಡದ ಬುವಿಯ ಮಾಯೆ

ನಿನ್ನ ರಕ್ಷೆಗೂಡಲ್ಲಿ ಬೆಚ್ಚಗೆ
ಆಡಗಲಿ ಎಷ್ಟು ದಿನ ?
ದೂಡು ಹೊರಗೆ ನನ್ನ
ಓಟ ಕಲಿವೆ, ಒಳನೋಟ ಕಲಿವೆ, ನಾ
ಕಲಿವೆ ಊರ್ಧ್ವ ಗಮನ,
ಓ ಆಗಾಧ ಗಗನ

ಮೇಲೆ ಹಾರಿ, ನಿನ್ನ ಸೆಳೆತ ಮೀರಿ,
ನಿರ್ಭಾರಸ್ಥಿತಿಗೆ ತಲುಪಿ
ಬ್ರಹ್ಮಾಂಡವನ್ನೇ ಬೆದಕಿ
ಇಂಧನ ತೀರಲು, ಬಂದೇ ಬರುವೆನು
ಮತ್ತೆ ನಿನ್ನ ತೊಡೆಗೆ,
ಮೂರ್ತ ಪ್ರೇಮದೆಡೆಗೆ

-ಬಿ ಆರ್ ಲಕ್ಷ್ಮಣರಾವ್.

No comments:

ಸಾರ್ಥ ಕ'ಥೆ'ಯ ಭಾವ (ಎಸ್. ಎಲ್. ಭೈರಪ್ಪನವರ ಸಾರ್ಥ ಕಾದಂಬರಿಯ ಒಂದು ಪಕ್ಷಿ ನೋಟ )

ಸಾರ್ಥ ಕ ' ಥೆ ' ಯ ಭಾವ ಸಾರ್ಥ ಎಂಬುದು ವಾಣಿಜ್ಯ ಪದ್ಧತಿ . ಎಂಟನೇ ಶತಮಾನದಲ್ಲಿ ಆನೆ , ಕುದುರೆ , ಹೇಸರಗತ್ತೆ ಹೀಗೆ ನೂರಾರು ಗಾಡಿಗಳ ಮೇಲೆ ...