Saturday, March 7, 2009

ನೀನಿಲ್ಲದೆ ನನಗೇನಿದೆ

ನೀನಿಲ್ಲದೆ ನನಗೇನಿದೆ
ಮನಸೆಲ್ಲ ನಿನ್ನಲ್ಲೆ ನೆಲೆಯಾಗಿದೆ
ಕನಸೆಲ್ಲ ಕಣ್ಣಲ್ಲೆ ಸೆರೆಯಾಗಿದೆ
ನೀನಿಲ್ಲದೆ ನನಗೇನಿದೆ

ನಿನಗಾಗಿ ಕಾದು ಕಾದು
ಪರಿತಪಿಸಿ ನೊಂದೆ ನಾನು
ಕಹಿಯಾದ ವಿರಹದ ನೋವು
ಹಗಲಿರುಳು ತಂದೆ ನೀನು ೨

ಎದೆಯಾಸೆ ಎನೋ ಎಂದು ನೀ ಕಾಣದಾದೆ
ನಿಶೆಯೊಂದೆ ನನ್ನಲ್ಲಿ ನೀ ತುಂಬಿದೆ
ಬೆಳಕೊಂದೆ ನಿನ್ನಿಂದ ನಾ ಬಯಸಿದೆ

ನೀನಿಲ್ಲದೆ ನನಗೇನಿದೆ
ಮನ್ಸೆಲ್ಲ ನಿನ್ನಲ್ಲೆ ನೆಲೆಯಾಗಿದೆ
ಕನಸೆಲ್ಲ ಕಣ್ಣಲ್ಲೆ ಸೆರೆಯಾಗಿದೆ
ನೀನಿಲ್ಲದೆ ನನಗೇನಿದೆ

ಒಲವೆಂಬ ಕಿರಣ ಬೀರಿ
ಒಳಗಿರುವ ಕಣ್ಣ ತೆರಿಸಿ
ಒಣಗಿರುವ ಎದೆನೆಲದಲ್ಲಿ
ಭರವಸೆಯ ಜೀವ ಹರಿಸಿ ೨

ಸೆರೆಯಿಂದ ಬಿಡಿಸಿ ನನ್ನ ಆತಂಕ ನೀಗೊ
ಹೊಸ ಜೀವೆ ನಿನ್ನಿಂದ ನಾ ಕಾಣುವೆ
ಹೊಸ ಲೋಕ ನಿನ್ನಿಂದ ನಾ ಕಾಣುವೆ

ನೀನಿಲ್ಲದೆ ನನಗೇನಿದೆ
ಮನ್ಸೆಲ್ಲ ನಿನ್ನಲ್ಲೆ ನೆಲೆಯಾಗಿದೆ
ಕನಸೆಲ್ಲ ಕಣ್ಣಲ್ಲೆ ಸೆರೆಯಾಗಿದೆ
ನೀನಿಲ್ಲದೆ ನನಗೇನಿದೆ

No comments:

ಸಾರ್ಥ ಕ'ಥೆ'ಯ ಭಾವ (ಎಸ್. ಎಲ್. ಭೈರಪ್ಪನವರ ಸಾರ್ಥ ಕಾದಂಬರಿಯ ಒಂದು ಪಕ್ಷಿ ನೋಟ )

ಸಾರ್ಥ ಕ ' ಥೆ ' ಯ ಭಾವ ಸಾರ್ಥ ಎಂಬುದು ವಾಣಿಜ್ಯ ಪದ್ಧತಿ . ಎಂಟನೇ ಶತಮಾನದಲ್ಲಿ ಆನೆ , ಕುದುರೆ , ಹೇಸರಗತ್ತೆ ಹೀಗೆ ನೂರಾರು ಗಾಡಿಗಳ ಮೇಲೆ ...